ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ೧೪ ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಶನಿವಾರ ಜಿಲ್ಲೆಯ ೨೭ ಮಂದಿಯಲ್ಲಿ ಸೋಂಕು ಕಾ ಣಿಸಿಕೊಂಡಿದೆ. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನ ೬, ಕಡೂರು ೮, ತರೀಕೆರೆ ೪, ಮೂಡಿಗೆರೆ ೬, ಕೊಪ್ಪ ೨ ಹಾಗೂ ಶೃಂಗೇರಿ ತಾಲ್ಲೂಕಿನ ಓರ್ವ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಪತ್ತೆಯಾದ ಸೋಂಕಿತರಲ್ಲಿ ೨೪ಮಂದಿಯನ್ನು ಹೋಮ್ ಐಸೋಲೇಶನ್‌ಗೆ ಒಳಪಡಿ ಸಲಾಗಿದೆ. ಇಬ್ಬರು ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಓರ್ವ ವ್ಯಕ್ತಯನ್ನು ಖಾಸಗಿ ಆ ಸ್ಪತ್ರೆಗೆ ದಾಖಲಿಸಲಾಗಿದೆ.
ಕೋವಿಡ್ ಸೋಂಕಿಗೆ ಒಳಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡೂರು ತಾಲ್ಲೂಕಿನ ೩೫ವರ್ಷದ ವ್ಯಕ್ತಿ ಹಾಗೂ ೭೦ವರ್ಷದ ವೃದ್ಧೆ ಚಿಕಿತ್ಸೆ ಫಲ ಕಾರಿಯಾಗದೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ ೫೦,೬೯೬ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೯,೮೫೨ ಮಂದಿ ಗುಣಮುಖರಾಗಿದ್ದಾರೆ. ೪೩೭ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಇದುವ ರೆಗೂ ೩೯೩ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.