ಚಿಕ್ಕಮಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಆಗಸ್ಟ್ ೧೫ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ ೧೫ ರಂದು ಬೆಳಗ್ಗೆ ೯.೦೦ ಗಂಟೆಗೆ ನಗರದ ನೇತಾಜಿ ಸುಭಾಷ್ ಚಂದ್ರಭೋಶ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.

೭೫ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಚಿವರು ಮಧ್ಯಾಹ್ನ ೩.೦೦ ಗಂಟೆಗೆ ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳಿ ಶೃಂಗೇರಿಯ ಶ್ರೀ ಶಂಕರ ಮಠಕ್ಕೆ ಭೇಟಿ ನೀಡುವ ಸಚಿವರು ಸಂಜೆ ೬.೦೦ ಗಂಟೆಗೆ ಶೃಂಗೇರಿಯಿಂದ ಗುಡ್ಡೇಕೊಪ್ಪಕ್ಕೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.