ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ೪೬ಮಂದಿ ಗುಣಮುಖರಾಗಿದ್ದು, ಶುಕ್ರವಾರ ಜಿಲ್ಲೆಯ 25 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೭, ಕಡೂರು ೫, ಮೂಡಿಗೆರೆ ೪, ನರಸಿಂಹರಾಜಪುರ ೨, ಕೊಪ್ಪ ೬ ಹಾಗೂ ಶೃಂಗೇರಿ ತಾಲ್ಲೂಕಿನ ಓರ್ವ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಪತ್ತೆಯಾದ ಸೋಂಕಿತರಲ್ಲಿ ೨೫ಮಂದಿಯನ್ನು ಹೋಮ್ ಐಸೋಲೇಶನ್‌ಗೆ ಒಳಪಡಿಸಲಾಗಿದೆ.

ಶುಕ್ರವಾರ ಕೋವಿಡ್ ಸೋಂಕಿನಿಂದ ಯಾವ ವ್ಯಕ್ತಿಯೂ ಮೃತಪಟ್ಟಿಲ್ಲವೆಂದು ಜಿಲ್ಲಾ ಆ ರೋಗ್ಯ ಇಲಾಖೆ ತಿಳಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ೫೦,೮೭೬ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ೫೦,೦೩೦ಮಂದಿ ಗುಣಮುಖರಾಗಿದ್ದಾರೆ. ಸದ್ಯ ೪೦೫ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ೩೯೫ಮಂದಿ ಮೃತಪಟ್ಟಿದ್ದಾರೆ.