ಚಿಕ್ಕಮಗಳೂರು(ಕನ್ನಡನಾಡಿ ಸುದ್ದಿಜಾಲ): ದೆಹಲಿಯಲ್ಲಿ ನಡೆದಿರುವ ಅಪ್ರಾಪ್ತ ಬಾಲೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಚಿಕ್ಕಮಗಳೂರಿನ ಅಜಾದ್ ಸರ್ಕಲ್ ನಲ್ಲಿ ವಿವಿಧ ಪಕ್ಷ, ಸಂಘಟನೆಗಳ ಸದಸ್ಯರು ಒಕ್ಕೊರಲಿನಿಂದ ಪ್ರತಿಭಟನೆ ನಡೆಸಿ ಕ್ಷಿಪ್ರಗತಿಯಲ್ಲಿ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲು ವಿಧಿಸಲು ಒತ್ತಾಯಿಸಿದ್ದಾರೆ.

ದೇಶದಾದ್ಯಂತ ಹಲವು ಇಂತಹ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಹೋರಾಟಗಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ರೇಖಾ ಹುಲಿಯಪ್ಪಗೌಡ, ಹೆಚ್. ಹೆಚ್. ದೇವರಾಜ್, ಎಂ.ಎಲ್ ಮೂರ್ತಿ, ಕೂದುವಳ್ಳಿ ಮಂಜು ಸೇರಿದಂತೆ  ವಿವಿಧ ಪಕ್ಷಗಳ ಮುಖಂಡರು, ಪ್ರಗತಿಪರ ಸಂಘಟನೆಯ ಸದಸ್ಯರು ಒಗ್ಗಟ್ಟಾಗಿ ಭಾಗವಹಿಸಿದ್ದರು.