ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹೇಮಂತ್‌ಕುಮಾರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿ ಪಕ್ಷದ ಜಿಲ್ಲಾ ಪದಾಧಿಕಾರಿಗಳು ರಾಜ್ಯ-ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನದಂತೆ ಜಯಪ್ರಕಾಶ್ ಹೆಗ್ಡೆಯವರನ್ನು ಬೆಂಬಲಿಸಲು ತೀರ್ಮಾನಿಸಿದ್ದು ಸುಮಾರು ೨ ಲಕ್ಷ ಮತಗಳ ಅಂತರದಲ್ಲಿ ಜಯಗಳಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮಗಳಲ್ಲಿ ಸಭೆ ನಡೆಸಿದಾಗ ಎಲ್ಲಾ ಗ್ರಾಮಗಳಿಂದಲೂ ಇಂಡಿಯಾ ಒಕ್ಕೂಟಕ್ಕೆ ಬೆಂಬಲ ಇರುತ್ತದೆ. ಹಾಗೂ ಉಡುಪಿ ಜಿಲ್ಲೆಯ ಕಾಪು, ಕುಂದಾಪುರ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲೂ ಸಹ ಇಂಡಿಯಾ ಒಕ್ಕೂಟದ ಜಯಪ್ರಕಾಶ್ ಹೆಗ್ಡೆಯವರಿಗೆ ಬೆಂಬಲ ಇರುತ್ತದೆ. ಇಂಡಿಯಾ ಒಕ್ಕೂಟ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವು ಸಾಧಿಸಲಿದ್ದಾರೆ ಎಂದರು.

ಬಿಜೆಪಿ ೧೦ ವ?ಗಳಿಂದ ಸುಳ್ಳು ಹೇಳಿ ಉದ್ಯೋಗ, ಜಿಎಸ್‌ಟಿ ಹಾಗೂ ಬಡವರ ಮೇಲೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಮಧ್ಯಮ ಹಾಗೂ ಬಡಜನರ ಜೀವನವು ಅಸ್ತವ್ಯಸ್ತವಾಗಿರುತ್ತದೆ. ಆದ್ದರಿಂದ ಎಲ್ಲಾ ಮತಬಾಂಧವರು ಇಂಡಿಯಾ ಒಕ್ಕೂಟದ ಜಯಪ್ರಕಾಶ್ ಹೆಗ್ಡೆಯವರಿಗೆ ಮತ ನೀಡಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಲು ಅನುಕೂಲ ಮಾಡಬೇಕೆಂದು ಮನವಿ ಮಾಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಂಗನಾಥ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸೈಯದ್ ಜಮೀಲ್ ಅಹಮದ್, ಎಸ್.ಸಿ ಹಾಗೂ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಪ್ರಭು, ಕಾರ್ಯಕರ್ತರಾದ ಪರಮೇಶ್ ಮತ್ತು ವಸಂತ್‌ಕುಮಾರ್ ಹಾಗೂ ಜಿಲ್ಲಾ ಕಾರ್ಯದರ್ಶಿ ಆದ ಅಂಥೋಣಿಯವರು ಉಪಸ್ಥಿತರಿದ್ದರು.

Aam Aadmi Party decision to support Jayaprakash Hegde