ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಧುನಿಕ ಶಕುನಿ. ಮೀಸಲಾತಿ ಮೂಲಕ ಜನರನ್ನು ಒಡೆದು ಸಂಘರ್ಷ ಸೃಷ್ಟಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿ(Bengaluru)ನಲ್ಲಿ ಸೋಮವಾರ ಬಿ.ಎಸ್‌.ಯಡಿಯೂರಪ್ಪ(BS Yadiyurappa)ಅವರ ನಿವಾಸದ ಮೇಲೆ ಕಲ್ಲುತೂರಾಟ ನಡೆದಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರ, ಒಳ ಮೀಸಲಾತಿ ಗೊಂದಲ ಸೃಷ್ಟಿಸುವ ಜತೆಗೆ ಬಿಜೆಪಿ(BJP)ಯವರೇ ಬಿ.ಎಸ್‌.ಯಡಿಯೂರಪ್ಪ(BS Yadiyurappa) ಮನೆಗೆ ಕಲ್ಲು ಹೊಡೆಯಲು ಕಳುಹಿಸಿದ್ದಾರೆ ಎಂದು ದೂರಿದರು.

ಏ.5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಭೇಟಿ: ಅನರ್ಹತೆ ಬಗ್ಗೆ ಇಲ್ಲಿಂದಲೇ ಉತ್ತ̧ರ ಬೊಮ್ಮಾಯಿ(Basavaraj Bommai) ಸರ್ಕಾರ ಚುನಾವಣೆ ಲಾಭಕ್ಕಾಗಿ ಜನರನ್ನು ಒಡೆಯಲು ತರಾತುರಿಯಲ್ಲಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೀಸಲಾತಿ ಪರಿಷ್ಕರಣೆ ಮಾಡಿದೆ. ಇದೆಲ್ಲವನ್ನೂ ಬೊಮ್ಮಾಯಿ ಮಾಡಿದ್ದರೆ ಯಡಿಯೂರಪ್ಪ ಅವರ ಮನೆ ಮೇಲೆ ಯಾಕೆ ದಾಳಿ ನಡೆದಿದೆ? ಅವರು ಅಧಿಕಾರದಲ್ಲೂ ಇಲ್ಲ. ಹೀಗಾಗಿ ಬಿಜೆಪಿಯವರೇ ಯಾರೋ ಯಡಿಯೂರಪ್ಪ ಮನೆಗೆ ಕಲ್ಲು ಎಸೆಯುವುದಕ್ಕೆ ಕಳುಹಿಸಿರಬೇಕು ಎಂದು ಆರೋಪ ಮಾಡಿದರು.

CM Bommai is a modern Shakuni