ಚಿಕ್ಕಮಗಳೂರು:  ವಿಕೃತಕಾಮಿ, ಅತ್ಯಾಚಾರಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂ ಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ಸೋಮವಾರ ಕಾರ್ಯಕರ್ತೆಯರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಕಚೇರಿಯಿಂದ ಮೆರವಣಿಗೆ ನಡೆಸಿದ ಮಹಿಳಾ ಕಾರ್ಯಕರ್ತೆಯರು ಹಾಗೂ ಮುಖಂ ಡರುಗಳು ಸಂಸದ ಪ್ರಜ್ವಲ್ ಹಾಗೂ ಹೊಳೇನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ದಿಕ್ಕಾರ ಕೂ ಗುತ್ತಾ ಇಂಥ ಕಾಮುಕರಿಂದ ಮಹಿಳೆಯರಿಗೆ ರಕ್ಷಣೆ ಒದಗಿಸಿಕೊಡಬೇಕು ಆಗ್ರಹಿಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾಹುಲಿಯಪ್ಪಗೌಡ ಭಾರತೀಯ ಸಂಸ್ಕೃ ತಿಯಲ್ಲಿ ಹೆಣ್ಣಿಗೆ ಪೂಜನೀಯ ಸ್ಥಾನವಿದೆ. ಅದರಲ್ಲೂ ಜೆಡಿಎಸ್‌ನಲ್ಲಿ ತೆನೆಹೊತ್ತ ಮಹಿಳೆಯ ಗುರುತಿಗೆ ವಿರುದ್ಧವಾಗಿ ಸಂಸದರು ಹಾಗೂ ಶಾಸಕರು ನಡೆದುಕೊಳ್ಳುತ್ತಿರುವುದು ನಾಚಿಕೇಡಿನ ಸಂಗತಿ ಎಂದು ಕಿಡಿ ಕಾರಿದರು.

ಅಪ್ಪ-ಮಗ ಈರ್ವರು ಮನೆಯ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯವೆಸದ್ದನ್ನು ನೊಂದ ಮಹಿಳೆ ಪ್ರಕರಣ ದಾಖಲಿಸುವ ಮೂಲಕ ಸಾರ್ವಜನಿಕರೆದುರು ಪ್ರಜ್ವಲ್ ಹಾಗೂ ರೇವಣ್ಣ ಹೀನಾಕೃತ್ಯವನ್ನು ಬಹಿ ರಂಗಪಡಿಸಿದ್ದಾರೆ. ಅಲ್ಲದೇ ಈ ಹಿಂದಿನ ಮಹಿಳೆಯರ ಮೇಲೆ ದೌರ್ಜನ್ಯವನ್ನು ಮುಕ್ತವಾಗಿ ಹೇಳುವ ಮೂ ಲಕ ರಕ್ಷಣೆ ಒದಗಿಸಲು ಹೋರಾಟ ಮಾಡುತ್ತಿದ್ದಾರೆ ಎಂದರು.

ಕಾಮದಾಸೆಗಾಗಿ ಮನೆಕೆಲಸದ ಕೂಲಿಕಾರ್ಮಿಕರು, ರಾಜಕೀಯ ಹಾಗೂ ಸರ್ಕಾರಿ ವೃತ್ತಿಯಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು ಬಳಸಿಕೊಂಡಿರುವುದು ನಾಡಿನ ದೊಡ್ಡ ದುರಂತ. ಶೋಷಣೆಗೆ ಒಳಗಾಗಿರುವ ಮಹಿಳೆಯರನ್ನು ರಕ್ಷಿಸುವ ಸಲುವಾಗಿ ರಾಜ್ಯದ ಮಹಿಳೆಯರು ಒಗ್ಗಟ್ಟಾಗಿ ಕೈ ಜೋಡಿಸಿ ಕಾಮುಕರನ್ನು ಮಟ್ಟ ಹಾಕಲು ಪ್ರಕರಣ ದಾಖಲಿಸಬೇಕು ಎಂದರು.

ನಾಡಿನ ಅಗ್ರಗಣ್ಯ ವ್ಯಕ್ತಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕುಟುಂಬದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ದಂತಾಗಿದೆ. ಇನ್ನೊಂದೆಡೆ ಹೆಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಹಣದಿಂದ ಸ್ವಾಭಿಮಾನದ ಜೀವನ ನಡೆಸುತ್ತಿರುವ ಮಹಿಳೆಯರನ್ನು ಸಹಿಸಿಕೊಳ್ಳಲಾರದೇ ಮಹಿಳೆಯರಿಗೆ ಹಾದಿ ತಪ್ಪುತ್ತಿದ್ದಾರೆ ಎನ್ನುತ್ತಿದ್ದು ಆದ ರೆ ನೈತಿಕವಾಗಿ ಹಾದಿ ತಪ್ಪುವ ಕೆಲಸ ಕುಟುಂಬದವರು ಮಾಡುತ್ತಿದ್ದಾರೆ ಎಂದು ದೂರಿದರು.

ಕೂಡಲೇ ಜೆಡಿಎಸ್ ಪಕ್ಷದ ವರಿಷ್ಟರು ತೆನೆಹೊತ್ತ ಮಹಿಳೆಯ ಗುರುತನ್ನು ತೆಗೆದುಹಾಕುವ ಮೂಲಕ ಪಕ್ಷವನ್ನು ಉಚ್ಚಾಟಿಸಬೇಕು. ಇಂಥ ಪ್ರಕರಣದಿಂದ ನಾಡಿನ ಆರೂವರೆ ಕೋಟಿ ಕನ್ನಡಿಗರಿಗೆ ಮಸಿ ಬಳಿ ಯುವ ಸ್ಥಿತಿ ಕುಟುಂಬದ ಸದಸ್ಯರು ನಿರ್ಮಿಸಿದ್ದು ನೈತಿಕ ಹೊಣೆಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ ಮಹಿಳೆಯರಿಗೆ ಗೌರವ ಸೂಚಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ ಸಂಸದ ಪ್ರಜ್ವಲ್‌ರ ಹಿಂದೆ ವಿಕೃತಕಾಮಿ ಹಾಗೂ ಗೋಮುಖವ್ಯಾಗ್ರ ಮುಖವಾಡವಿದೆ. ಮನೆಕೆಲಸಕ್ಕೆಂದು ತೆರಳುವ ಬಡ ಹಾಗೂ ಹಿಂದುಳಿದ ವರ್ಗದ ಮಹಿಳೆಯರನ್ನು ಕಾಮದಾಸೆಗಾಗಿ ಬಳಸಿಕೊಂಡಿರುವುದು ನಾಗರೀಕ ಸಮಾ ಜ ತಲೆತಗ್ಗಿಸುವಂತಹ ಪ್ರಕರಣವಾಗಿದೆ ಎಂದು ಹೇಳಿದರು.

ವಯಸ್ಸಿನ ಅಂತರವನ್ನು ಗಮನಿಸದೇ ಹಾಲಿ ಸಂಸದರು ಮಹಿಳೆಯರನ್ನು ಬಳಸಿಕೊಂಡು ವಿಕೃತ ರೀತಿಯಲ್ಲಿ ಮರೆದಿರುವುದು ವಿಪರ್ಯಾಸ. ಅಲ್ಲದೇ ತಮ್ಮ ವೀಡಿಯೋವನ್ನೇ ತಾನೇ ಚಿತ್ರಿಸಿಕೊಂಡು ಗಮನಿಸಿದರೆ ಇಂಥ ಕಾಮುಕ ಸಂಸದರಾಗಿ ಕರ್ತವ್ಯ ನಿರ್ವಹಿಸಲು ನಾಲಾಯಕ್ ಎಂದ ಅವರು ತಮ್ಮ ತಾಯಿಯ ತವರು ಹಾಸನ ಎಂದೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಬಾನ ಸುಲ್ತಾನ ಮಾತನಾಡಿ ನಾಡಿನ ಹೆಣ್ಣು ಮಕ್ಕಳನ್ನು ಗೌರವಿಸುವ ಗುಣ ಇಲ್ಲದಿರುವ ಸಂಸದರು ಜನಸಾಮಾನ್ಯರ ಬದುಕನ್ನು ಹಸನುಗೊಳಿಸಲು ಸಾಧ್ಯವಿಲ್ಲ. ಇಂಥ ನೀಚ ಹಾಗೂ ಅನಾಗರೀಕತೆಯ ವ್ಯಕ್ತಿತ್ವ ಹೊಂದಿರುವ ಪ್ರಜ್ವಲ್ ಅವರನ್ನು ಯಾವ ದೇಶದಲ್ಲಿ ಅಡಗಿ ದ್ದಾರೆಂದು ಮಾಹಿತಿ ತಿಳಿದು ಅಲ್ಲಿಂದಲೇ ಬಂಧಿಸಿ ಕಠಿಣ ಶಿಕ್ಷೆ ಗುರಿಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ನಿಡಘಟ್ಟ ಉಪಾಧ್ಯಕ್ಷೆ ಹೇಮಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಶೀಲಾ, ನಗರಾಧ್ಯಕ್ಷೆ ಇಂದಿರಾ ಶಂಕರ್, ಮುಖಂಡರಾದ ಯಶೋಧ, ಮಲ್ಲಿಕಾ ದೇವಿ, ನೇತ್ರಾವತಿ, ಶೋಭಾ, ರೇವತಿ,ಸವಿತಾ, ತನೋಜ್, ಸುದೀಪ್, ನೂರ್‌ಅಹ್ಮದ್ ಮತ್ತಿತg ರಿದ್ದರು.

Congress protests to arrest MP Prajwal Revanna