ಬಾಳೆಹೊನ್ನೂರು: ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ೨೦೨೪ನೇ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.

ಏ.೧ರಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕ ಬಾಣಾವರದಲ್ಲಿ ಶ್ರೀ ಬಾಣೇಶ್ವರ ದೇವಸ್ಥಾನ ಉದ್ಘಾಟನೆ, ೨ರಂದು ಚಿಕ್ಕಮಗಳೂರು ಜಿಲ್ಲೆ ಬೇರುಗಂಡಿ ಬೃಹನ್ಮಠದಲ್ಲಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಕಳಸಾರೋಹಣ ಹಾಗೂ ರೇಣುಕ ಮಹಾಂತ ಶ್ರೀಗಳ ಪಟ್ಟಾಧಿಕಾರದ ದ್ವಾದಶ ವರ್ಧಂತಿ ಸಮಾರಂಭ, ೩ರಂದು ಹುಬ್ಬಳ್ಳಿಯಲ್ಲಿ ಆರ್.ಎಂ. ಹಿರೇಮಠರ ಅಮೃತ ಮಹೋತ್ಸವ ಸಮಾರಂಭ, ೪ರಂದು ಬೆಂಗಳೂರಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭದ ಸಾನ್ನಿಧ್ಯ ವಹಿಸುವರು.

ಏ.೧೦ರಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕ ಮಲೇಬೆನ್ನೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಇಷ್ಟಲಿಂಗ ಮಹಾಪೂಜಾ, ೧೨ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕ ನಾಗರನವಿಲೆಯಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ ನಡೆಸುವರು. ದಿನಾಂಕ ೧೫ರಂದು ಕಲಬುರ್ಗಿ ಜಿಲ್ಲೆ ಶ್ರೀನಿವಾಸ ಸರಡಗಿಯಲ್ಲಿ ಶ್ರೀ ರೇವಣಸಿದ್ಧೇಶ್ವರ ಶ್ರೀಗಳ ಷಷ್ಟಬ್ಧಿ ಸಮಾರಂಭದಲ್ಲಿ ಭಾಗವಹಿಸುವರು.

ಏ. ೧೬ರಂದು ಬೆಳಿಗ್ಗೆ ೧೧ ಗಂಟೆಗೆ ಬೀದರ ನಗರದಲ್ಲಿ ಶಾಲಾ ಸಮಾರಂಭ, ಸಂಜೆ ೫ ಗಂಟೆಗೆ ಮಹಾರಾಷ್ಟ್ರ ರಾಜ್ಯ ಉದ್ಗೀರದಲ್ಲಿ ಶ್ರೀ ಹಾವಲಿಂಗೇಶ್ವರ ಗದ್ದುಗೆ ಕಳಸಾರೋಹಣ ಸಮಾರಂಭ, ೧೭ರಂದು ಕಲಬುರ್ಗಿ ಜಿಲ್ಲೆ ಕಾಳಗಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, ೧೯ರಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕ ಗೊಂಡೇದಹಳ್ಳಿ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭದ ಸಾನ್ನಿಧ್ಯ ವಹಿಸುವರು. ೨೩ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀವಾದ ನೀಡುವರು.

ಏ. ೨೭ರಂದು ಶಿರಸಿ ಮತ್ತು ಸೊರಬ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸುವರು ಎಂದು ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ ತಿಳಿಸಿದ್ದಾರೆ.

Details of Sri Rambhapuri Jagadguru’s tour in May