ಚಿಕ್ಕಮಗಳೂರು: ಹಿಂದುಳಿದ ದೀನದಲಿತರ, ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಬೆಂಬಲಿಸುವಂತೆ ಶಾಸಕ ಹೆಚ್.ಡಿ ತಮ್ಮಯ್ಯ ಮತದಾರರಲ್ಲಿ ಮನವಿ ಮಾಡಿದರು.

ಅವರು ಇಂದು ನಗರದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮನೆ-ಮನೆಗೆ ಕರಪತ್ರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ೫ ಗ್ಯಾರಂಟಿಗಳ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್ ಬಿಡುಗಡೆ ಮಾಡಿರುವ ೫ ಗ್ಯಾರಂಟಿ ಯೋಜನೆಗಳ ಪ್ರತಿಗಳನ್ನು ಮನೆಗಳಿಗೆ ನೀಡಿ ಮತ ನೀಡುವಂತೆ ಮನವರಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಾಗಿ ೫ ನ್ಯಾಯಗಳಾದ ಯುವನ್ಯಾಯ, ರೈತನ್ಯಾಯ, ಪಾಲುದಾರಿಕೆ ನ್ಯಾಯ, ಮಹಿಳಾ ನ್ಯಾಯ, ಶ್ರಮಿಕ ನ್ಯಾಯ ಇವುಗಳ ಗ್ಯಾರಂಟಿ ಕಾರ್ಡನ್ನು ಮತದಾರರಿಗೆ ನೀಡಿ ಮತ ಕೇಳುತ್ತೇವೆಂದು ತಿಳಿಸಿದರು.

ಸರಳ ಸಜ್ಜನಿಕೆ ವ್ಯಕ್ತಿತ್ವದ ಜಯಪ್ರಕಾಶ್ ಹೆಗ್ಡೆಯವರು ಹಿಂದೆ ಸಂಸದರಾಗಿ ಸೇವೆ ಸಲ್ಲಿಸಿದ ಅಭಿವೃದ್ಧಿ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿದೆ ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಬಲ ಪಡಿಸಬೇಕೆಂದು ವಿನಂತಿಸಿದರು.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನರೇಂದ್ರ ಮೋದಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ಮಾಡಿದ ಪರಿಣಾಮ ಬಿಜೆಪಿ ಗೆದ್ದೇ ಬಿಟ್ಟಿತು ಎಂಬಂತೆ ಬಿಂಬಿಸಲಾಯಿತು ಆದರೆ ರಾಜ್ಯದ ಜನತೆ ಪ್ರಜ್ಞಾವಂತರಾಗಿದ್ದು ಈ ಭಾರಿಯೂ ಕಾಂಗ್ರೆಸ್‌ಗೆ ಮತ ನೀಡುತ್ತಾರೆಂಬ ವಿಶ್ವಾಸವಿದೆ ಜಯಪ್ರಕಾಶ್ ಹೆಗ್ಡೆ ಅತಿ ಹೆಚ್ಚು ಅಂತರದ ಗೆಲುವು ಸಾಧಿಸುತ್ತಾರೆಂದು ಹೇಳಿದರು.

ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಗೆ ಏ.೨೬ ರಂದು ನಡೆಯಲಿರುವ ಚುನಾವಣೆಯಲ್ಲಿ ರಾಜ್ಯ ಮಹಿಳೆಯರು ತಕ್ಕ ಉತ್ತರ ಕೊಡುತ್ತಾರೆಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಧಾನಪರಿ?ತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ ರಾಜ್ಯಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.

ಬಡವರ ಸಂಕ?ಗಳನ್ನು ಕಾಂಗ್ರೆಸ್ ಮುಖಂಡರು ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆಯಡಿ ೨ ಸಾವಿರ ರೂ ಕೊಡಬೇಕು. ಶಕ್ತಿ, ಅನ್ನಭಾಗ್ಯ ಯೋಜನೆಯಡಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಮುಂದಾಗಿದ್ದು ರಾಜಕಾರಣಕ್ಕಾಗಿ ಈ ರೀತಿ ತುಚ್ಚ ಮಾತುಗಳನ್ನು ಹೆಣ್ಣು ಮಕ್ಕಳು ಸಹಿಸುವುದಿಲ್ಲ ಎಂದು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮಾತನಾಡಿ ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ಪ್ರತಿ ಮನೆಗೆ ೫ ಗ್ಯಾರಂಟಿಗಳನ್ನು ಮನವರಿಕೆ ಮಾಡಲು ಕರಪತ್ರ ಹಂಚುತ್ತಿದ್ದೇವೆ. ಈ ನಿಟ್ಟಿನಲ್ಲಿ ಭ್ರ? ಬಿಜೆಪಿ ಸರ್ಕಾರವನ್ನು ತೊಲಗಿಸಿ ಜನರ ಬದುಕಿಗೆ ಆಶ್ರಯ ನೀಡುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ವಿನಂತಿಸಿದರು.

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ ಮಾರಕವಾಗಿರುವ ಬಿಜೆಪಿ ತೊಲಗಿಸಿ ಎಂದು ಕರೆ ನೀಡಿದ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಒಟ್ಟಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರೇಖಾಹುಲಿಯಪ್ಪಗೌಡ, ಡಾ|| ಡಿ.ಎಲ್ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್ ಮೂರ್ತಿ, ನಗರಸಭೆ ಸದಸ್ಯರುಗಳಾದ ಲಕ್ಷ್ಮಣ, ಮಂಜುಳಾ ಲಕ್ಷ್ಮಣ, ಸಿ.ಪಿ ಲಕ್ಷ್ಮಣ, ಕಾವ್ಯ ಮತ್ತಿತರದಿದ್ದರು.

Door-to-door leafleting programme