ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ  ಕಾರೊಂದು ಕಣಿವೆಗೆ ಉರುಳಿದ್ದು, ಭೀಕರ ಅಪಘಾತದಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಶ್ತ್ವಾರ್‌ನ ಮಾರ್ವಾಹ್ ಪ್ರದೇಶದಲ್ಲಿ ಟಾಟಾ ಸುಮೋ ಟ್ಯಾಕ್ಸಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದೆ.  ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ವಾ ಪ್ರದೇಶದಲ್ಲಿ ಟಾಟಾ ಸುಮೋ ಭೀಕರ ಅಪಘಾತಕ್ಕೀಡಾಗಿರುವ ಸುದ್ದಿ ತಿಳಿದು ಈಗ ತಾನೇ  ಕಿಶ್ತ್ವಾರ್ ಜಿಲ್ಲಾಧಿಕಾರಿ ಡಾ ದೇವಾಂಶ್ ಯಾದವ್ ಅವರೊಂದಿಗೆ ಮಾತನಾಡಿದೆ. 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಅಗತ್ಯವಿರುವ ಹೆಚ್ಚಿನ ಸಹಾಯವನ್ನು ಸಹ ಒದಗಿಸಲಾಗುವುದು. ಅಗಲಿದ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಟ್ವೀಟ್‌ ಮಾಡಿದ್ದಾರೆ.

Eight killed as car overturns