ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹಾಗೂ ಆಯಾ ಕ್ಷೇತ್ರದ ಮುಖಂಡರೊಂದಿಗೆ ಮತಯಾಚನೆಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ ೨೯ ರಂದು ಪ್ರವಾಸ ಕೈಗೊಳ್ಳಲಿದ್ದಾರೆ.

ನವೆಂಬರ್ ೨೯ ರಂದು ಚಿಕ್ಕಮಗಳೂರು ಕ್ಷೇತ್ರ, ೩೦ ರಂದು ಕಡೂರು ಕ್ಷೇತ್ರ, ಡಿಸೆಂಬರ್ ೦೧ ರಂದು ಮೂಡಿಗೆರೆ ಕ್ಷೇತ್ರ, ೦೨ ರಂದು ಆಲ್ದೂರು ಮತ್ತು ವಸ್ತಾರೆ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ.   ಡಿಸೆಂಬರ್ ೦೩ ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ವಿಧಾನ ಪರಿಷತ್ ಚುನಾವಣಾ ಸಂಬಂಧ ಸಭೆ ನಡೆಸಲಿದ್ದಾರೆ.

ಡಿಸೆಂಬರ್ ೦೪ ರಂದು ತರೀಕೆರೆ ಕ್ಷೇತ್ರ ಹಾಗೂ ೦೫ ರಂದು ಶೃಂಗೇರಿ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದು, ಅಂದು ಆಯಾ ಕ್ಷೇತ್ರದ ಬ್ಲಾಕ್ ಅಧ್ಯಕ್ಷರುಗಳು ಹಾಜರಿರಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದ್ದಾರೆ.

MLC Election : ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ