ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿಕ್ಕಮಗಳೂರು ಮತ್ತು ಉದ್ಯೋಗದಾತ ಸಂಸ್ಥೆ ಇವರ ಸಹಯೋಗದೊಂದಿಗೆ ನಗರದ ಎಐಟಿ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ದತ್ತ ಜಯಂತಿ ಹಿನ್ನಲೆ ಡಿಸೆಂಬರ್ 29ಕ್ಕೆ ಮುಂದೂಡಲಾಗಿದೆ ಎಂದು ಕ.ರಾ.ಸ.ನೌ.ಸಂಘ ಜಿಲ್ಲಾಧ್ಯಕ್ಷ ದೇವೇಂದ್ರ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಸುಮಾರು ೪೦ ಕ್ಕೂ ಹೆಚ್ಚು ಪ್ರತಿಷ್ಟಿತ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ಬಿ.ಎ, ಬಿಕಾಂ, ಬಿಬಿಎಂ, ಬಿಎಸ್‌ಸಿ, ಬಿ.ಇ. ಎಂಬಿಎ, ಎಂಸಿಎ, ಎಂಎಸ್‌ಡಬ್ಲು, ಐಟಿಐ ಹಾಗೂ ಇನ್ನಿತರ ಯಾವುದೇ ಉನ್ನತ ಪದವಿ ಪಡೆದ ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ  ವೈಯಕ್ತಿಕ ಮಾಹಿತಿಯನ್ನು (ರೆಸ್ಯೂಮ್) ೯೧೦೮೫೨೨೪೦೭//೭೮೯೨೦೫೨೮೭೯ ವಾಟ್ಸಪ್ ನಂಬರ್ ಡಿ. 10 ರೊಳಗೆ ಕಳುಹಿಸುವಂತೆ ತಿಳಿಸಲಾಗಿದೆ.