ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಘಟನೆ ಸಂಬಂಧ ಮಹಿಳೆಯ ಮೃತದೇಹ ನೋಡಲು ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಗ್ರಾಮಸ್ಥರು ಫೇರಾವ್ ಮಾಡಿ ಹಲ್ಲೆ ಯತ್ನ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿದ್ದಾರೆನ್ನಲಾದ ಘಟನೆ ರವಿವಾರ ಸಂಜೆ ನಡೆದಿದೆ.

ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದಲ್ಲಿ ರವಿವಾರ ಮುಂಜಾನೆ ಕಾಡಾನೆ ದಾಳಿಯಿಂದ ಶೋಭಾ ಎಂಬವರು ಮೃತಪಟ್ಟಿದ್ದರು. ಮಹಿಳೆ ರವಿವಾರ ಬೆಳಗ್ಗೆ ಮೃತಟ್ಟಿದ್ದರೂ ಶಾಸಕ ಕುಮಾರಸ್ವಾಮಿ ಅವರು ಮೃತದೇಹ ನೋಡಲು ಸಂಜೆ ವೇಳೆ ತೆರಳಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶಾಸಕರಿಗೆ ಹಲ್ಲೆ ಯತ್ನಕ್ಕೆ ಮುಂದಾಗಿದ್ದು ಪೊಲೀಸಲ ಸಹಾಯದಿಂದ ಹೂರ ಬಂದಿದ್ದಾರೆ.

ಶಾಸಕ ಕುಮಾರಸ್ವಾಮಿ ಅವರು ರವಿವಾರ ಮೂಡಿಗೆರೆ ಕ್ಷೇತ್ರದಲ್ಲೇ ಇದ್ದು, ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಸುದ್ದಿ ಅವರಿಗೆ ತಿಳಿದಿದ್ದರೂ ಸಕಾಲಕ್ಕೆ ಸ್ಥಳಕ್ಕೆ ಭೇಟಿ ನೀಡದೇ ರಾತ್ರಿ ವೇಳೆ ಸ್ಥಳಕ್ಕೆ ತೆರಳಿದ್ದಾರೆಂದು ಆರೋಪಿಸಲಾಗಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ಶಾಸಕ ಕುಮಾರಸ್ವಾಮಿ ಅವರಿಗೆ ಘರಾವ್ ಹಾಕಿ ಆಕ್ರೋಶವ್ಯಕ್ತ ಪಡಿಸಿದ್ದಾರೆ.

ಉದ್ರಿಕ್ತಗೊಂಡ ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು, ಪರಿಸ್ಥಿತಿ ಕೈ ಮೀರಿದ ವೇಳೆ ಲಾಠಿ ಪ್ರಹಾರವನ್ನೂ ನಡೆಸಿದ್ದಾರೆ, ಈ ಸಂಬಂಧ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಹರಿದ ಬಟ್ಟೆಯಲ್ಲೇ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹವನ್ನು ವೀಕ್ಷಿಸಲು ತೆರಳಿದ ವೇಳೆ ನನ್ನ ಮೇಲೆ ಗ್ರಾಮಸ್ಥರು ಆಕ್ರೋಶಗೊಂಡು ಹಲ್ಲೆಗೆ ಮುಂದಾದರು ಎಂದು ಹೇಳಿದ್ದಾರೆ.

Mla M.P. Kumaraswamy attempts to attack him