ನವದೆಹಲಿ: ತನ್ನ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ  ಶ್ರದ್ಧಾ ವಾಕರ್‌  ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪ ಹೊತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ವಾಸಿಸುತ್ತಿದ್ದ ಛತ್ತರ್‌ಪುರದ ಪ್ಲಾಟ್ ನಿಂದ ದೆಹಲಿ ಪೊಲೀಸರು ಐದು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಫ್ತಾಬ್ ನನ್ನನ್ನು ಕೊಂದು ತುಂಡು ಮಾಡಿ ಎಸೆಯುತ್ತಾನೆ’: 2020ರಲ್ಲಿ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದ ಶ್ರದ್ಧಾ ವಾಲ್ಕರ್

ಆದರೆ ಆಕೆಯ ದೇಹವನ್ನು ಕತ್ತರಿಸಲು ಬಳಸಿದ ಚಾಕು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆಯಲಾದ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಒಂದು ವೇಳೆ ಈ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂಬುದು ವಿಧಿ ವಿಜ್ಞಾನ ಪರೀಕ್ಷೆಯ ನಂತರವೇ ಖಚಿತವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Police recover 5 knives from plot