ಮೈಸೂರು: ಮೃತ ಅಣ್ಣನ ಹೆಸರಿನಲ್ಲಿ 24 ವರ್ಷಗಳಿಂದ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸಿ ಈಚೆಗೆ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಲಕ್ಷ್ಮಣೇಗೌಡ ಎಂಬಾತನನ್ನು‍ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್‌ ಅಮಾನತುಗೊಳಿಸಿದ್ದಾರೆ.

ಪ್ರಕರಣವು ನ್ಯಾಯಾಲಯದಲ್ಲಿದ್ದು, ಇಲಾಖಾ ಮಟ್ಟದಲ್ಲೂ ತನಿಖೆ ನಡೆಯುತ್ತಿದ್ದು, ಈಗ ಆತ ಅರೋಪಿಯಷ್ಟೆ. ಸದ್ಯದ ಮಟ್ಟಿಗೆ ಆತನನ್ನು ಸರ್ಕಾರಿ ನೌಕರ ಎಂದೇ ಪರಿಗಣಿಸಿದ್ದೇವೆ. ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲು ಈ ಪ್ರಕ್ರಿಯೆಗೆ ಮುಂದಾಗಿದ್ದೇವೆ. ನೋಟಿಸ್‌ ನೀಡಿ, ವಿಚಾರಣೆ ನಡೆಸಿ ಬಳಿಕ ವಜಾಗೊಳಿಸಬೇಕಾಗುತ್ತದೆ’ ಎಂದು ತಿಳಿಸಿದರು.

Teacher suspended