ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಪಿಸ್ತೂಲ್‌ ನಿಂದ ಗುಂಡು ಹಾರಿಸಿರುವ ಘಟನೆ ಇಂದು ನಡೆದಿದೆ.10ನೇ ತರಗತಿಯ ಬಾಲಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಬೈದಾಡಿದ್ದಾರೆ.

ಶಿಕ್ಷಕ ನಿಂದಿಸಿದ್ದರಿಂದ ವಿದ್ಯಾರ್ಥಿಯೊಬ್ಬ ಇಂತಹ ಕೃತ್ಯವಸೆಗಿದ್ದಾನೆ. ಶಿಕ್ಷಕನ ಮೇಲೆ ಆರೋಪಿ ವಿದ್ಯಾರ್ಥಿ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಯಗೊಂಡಿದ್ದರೂ ಶಿಕ್ಷಕ ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿಕ್ಷಕರನ್ನು ಲಕ್ನೋಗೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ದೀಕ್ಷಿತ್ ತಿಳಿಸಿದ್ದಾರೆ.

ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿ ಕೈಯಲ್ಲಿ ಗನ್ ಹಿಡಿದು ಶಿಕ್ಷಕರನ್ನು ಹಿಂಬಾಲಿಸಿದ್ದು, ಆತನ ಕೈಯಲ್ಲಿದ್ದ ಪಿಸ್ತೂಲ್ ಕಸಿದುಕೊಳ್ಳಲು ಶಿಕ್ಷಕ ಪ್ರಯತ್ನಿಸಿದ್ದಾರೆ. ನಂತರ ಕೆಲವರು ಇದನ್ನು ಗಮನಿಸಿ ಧಾವಿಸಿ ಬಂದು ವಿದ್ಯಾರ್ಥಿಯನ್ನು ಹಿಡಿದುಕೊಂಡಿದ್ದಾರೆ. ಶಿಕ್ಷಕ ಕುಸಿದು ಕುಳಿತಿದ್ದಾರೆ. ವಾಗ್ದಂಡನೆಗೆ ಒಳಗಾಗಿದ್ದ ವಿದ್ಯಾರ್ಥಿಗೆ ಇಷ್ಟೊಂದು ಬೇಸರವಾಗಿದೆ ಎಂದು ತಿಳಿದಿರಲಿಲ್ಲ ಎಂದು ಶಿಕ್ಷಕರು ಹೇಳಿದ್ದಾರೆ