ಬೆಳಗಾವಿ:  ಸಮಾಜದಲ್ಲಿ ಗಣ್ಯ ಸ್ಥಾನದಲ್ಲಿರುವ ನಾಯಕರೂ ಬಾಲಿಶ ಹೇಳಿಕೆಗಳನ್ನು ನೀಡುತ್ತಿರುವುದು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈ ಎಲ್ಲಾ ವಿಚಾರಗಳ ನಡುವೆಯೇ ವಿಧಾನಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಕಿಡಿ ಕಾರಿದ್ದಾರೆ.

ಹೌದು ಬೆಳಗಾವಿಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಕಿಡಿ ಕಾರಿದ್ದಾರೆ. ಬಿಜೆಪಿ, ಆರ್‌ಎಸ್ಎಸ್‌ನವರು ಕರ್ನಾಟಕದ ಜನ ತಲೆತಗ್ಗಿಸುವಂತ ಕೆಲಸ ಮಾಡ್ತಿದ್ದಾರೆ ಎಂದಿರುವ ಅವರು, ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ರಾಷ್ಟ್ರವನ್ನು ಸ್ಥಾಪನೆ ಮಾಡಿದವರಿಗೂ ಅಪಮಾನ ಮಾಡುವಂತ ಘಟನೆ ನಡೆಯುತ್ತಿದೆ. ಸ್ವಾತಂತ್ರ್ಯ ಹೋರಾಟ ಕೇವಲ ಒಂದು ಜಾತಿ, ಭಾಷೆ, ಪ್ರಾಂತ್ಯದ ವಿಚಾರ ಆಗಿರಲಿಲ್ಲ. ಲಕ್ಷಾಂತರ ಜನ ತ್ಯಾಗ ಬಲಿದಾನ ಮಾಡಿ ಸ್ವಾತಂತ್ರ್ಯ ಪಡೆದಿರುವಂತಹದ್ದು ಎಂದಿದ್ದಾರೆ.

ಅಲ್ಲದೇ ಸಂವಿಧಾನ ವಿರುದ್ಧ ಬಿಜೆಪಿ, ಮಂತ್ರಿಗಳು, ಸಂಘಪರಿವಾರ ಸದಸ್ಯರು ಷಡ್ಯಂತ್ರ ಮಾಡೋದನ್ನ ನೋಡುತ್ತಿದ್ದೇವೆ. ಮೊಟ್ಟಮೊದಲಿನ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದ್ದು ಬಹದೂರ್ ಎಸ್ ಜಾಫರ್. ಇದನ್ನು ಯಾರೂ ಸಹ ಮರೆಯಕ್ಕಾಗೋದಿಲ್ಲ. ತದನಂತರ 1857ರಲ್ಲಿ ಝಾನ್ಸಿ ರಾಣಿ ಯಾವುದೇ ಧರ್ಮ, ಜಾತಿ, ಭಾಷೆ, ಪ್ರಾಂತ್ಯ ಲೆಕ್ಕಿಸದೇ ಸ್ವಾತಂತ್ರ್ಯ ಹೋರಾಟ ಮಾಡಿದ್ರು. ಏನೂ ನಿರೀಕ್ಷೆ ಇಲ್ಲದೇ ಈ ಭಾರತ ದೇಶವನ್ನ ನಮ್ಮ ಕೈಗೆ ಕೊಟ್ಟಿದ್ದಾರೆ. ಭಾರತ ದೇಶ ಉಳಿಸುವ ಕೆಲಸ ನಾವೆಲ್ಲ ಮಾಡಬೇಕಿದೆ. ಏನಾದರೂ ಒಳ್ಳೆಯ ಕೆಲಸ ಮಾಡೋಣ. ಮುಂದಿನ ಪೀಳಿಗೆಗೆ ಈ ಭಾರತ ದೇಶ ಸಂವಿಧಾನ ಕೊಟ್ಟು ಹೋಗಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.

The people of Karnataka are doing a humiliating job.

ಇದನ್ನೂ ಓದಿ: Rama’s birthday: ಶ್ರೀ ರಾಮನವಮಿ ಇಂದು ರಾಮ ಹುಟ್ಟಿದ ದಿನ

ಇದನ್ನೂ ಓದಿ: Panaka-Kosambari: ಶ್ರೀರಾಮ ನವಮಿಯಂದು ಪಾನಕ- ಕೋಸಂಬರಿ ತಯಾರಿಸುವುದರ ವಿಧಾನ