ಚಿಕ್ಕಮಗಳೂರು: ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದಲ್ಲಿ ನಡೆದಿದೆ.

ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್ ಕಾರ್ಮಿಕ ಅಕ್ಬರ್ (36) ಎಂಬುವವರು ಮೃತಪಟ್ಟಿದ್ದಾರೆ. ದಾಳಿಯಿಂದ ಕೆಳಕ್ಕೆ ಬಿದ್ದ ಅಕ್ಬರ್ ನ ಎದೆ ಮೇಲೆ ಆನೆ ಕಾಲಿಟ್ಟು, ದಂತದಿಂದ ತಿವಿದು ಭೀಕರವಾಗಿ ಹತ್ಯೆ ಮಾಡಿದೆ.

ಕಳೆದ 2 ದಿನದ ಹಿಂದೆ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Timber worker killed in forest attack