ಚಿಕ್ಕಮಗಳೂರು:  ತರೀಕೆರೆ: ಪ್ರೀತಿಸಿ ವಿವಾಹವಾಗಿ ದೂರವಾಗಿದ್ದ ಪತ್ನಿ ತವರು ಮನೆಗೆ ಜಾತ್ರೆಗೆ ಬಂದಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಪತಿ ಕೊಲೆ ಮಾಡಿದ್ದಾನೆ. ಬಟ್ಟೆ ಒಗೆಯಲು ಹೋದಾಗ ಹಿಂಭಾಲಿಸಿ ಬಂದು ಬರ್ಭರವಾಗಿ ಕೊಂದು ಭದ್ರಾ ಹೊಳೆಯಲ್ಲಿ ರಕ್ತದೊಕುಳಿ ಹರಿಸಿದ್ದಾನೆ.

ಪ್ರೀತಿಸುವಾಗಲೇ ಅತ್ಯಾಚಾರ ಎಸಗಿ ಫೋಕ್ಸ ಪ್ರಕರಣ ಹಾಕಿಸಿಕೊಂಡು ಅದೇ ಬಾಲಕಿಯ ವಿವಾಹವಾಗಿ ನಿತ್ಯ ಕಿರುಕುಳ ಕೊಟ್ಟು ದೂರಾಗಿದ್ದ ಪತಿ ಹೊಂಚು ಹಾಕಿ ತವರಿಗೆ ಮುಳಕಟ್ಟಮ್ಮ ಜಾತ್ರೆಗೆ ಬಂದಿದ್ದ ಪತ್ನಿಯನ್ನು ಮಚ್ಚಿನಿಂದ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ.

ತರೀಕೆರೆ ತಾಲ್ಲೂಕಿನ ಕರಕುಚ್ಚಿ ಗ್ರಾಮದ ಮೇಘನಾಳನ್ನು ಅದೇ ಗ್ರಾಮದ ಚರಣ್ ಪ್ರೀಸಿಸಿ ವಿವಾಹವಾಗಿದ್ದ ಅಪ್ರಾಪ್ತಿಯಾಗಿದ್ದ ಕಾರಣ ವಿವಾಹಕ್ಕೂ ಮೊದಲು ಅತ್ಯಾಚಾರ ಎಸಗಿದ್ದ ಕಾರಣ ಫೋಕ್ಸ ಪ್ರಕರಣ ದಾಖಲಾಗಿತ್ತು, ನಂತರ ಎರಡೂ ಮನೆಯವರು ಸೇರಿ ಇಬ್ಬರಿಗೂ ಮದುವೆ ಮಾಡಿದ್ದರು.

ಕೆಲ ಕಾಲದ ಬಳಿಕ ನಿತ್ಯ ಪತ್ನಿಗೆ ಕಿರುಕುಳ ಕೊಡಲಾರಂಭಿಸಿದ ಇದರಿಂದ ಬೇಸತ್ತ ಮೇಘನಾ ಮನೆಯವರು ಅವಳನ್ನು ಅಜ್ಜಿಯ ಮನೆ ಬಿಆರ್.ಪಿ ಗೆ ಕಳುಹಿಸಿದ್ದರು. ಕರಕುಚ್ಚಿಯಲ್ಲಿ ಮುಳಕಟ್ಟಮ್ಮ ಜಾತ್ರೆ ಇರುವ ಕಾರಣ ನಿನ್ನೆ ತವರು ಮನೆಗೆ ಬಂದಿದ್ದ ಅವಳು ಇಂದು ಹೊಳೆಯಲ್ಲಿ ಬಟ್ಟೆ ಹೊಗೆಯಲು ತೆರಳಿದ್ದ ವೇಳೆ ಹಿಂಬಾಲಿಸಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಸದ್ಯ ಆರೋಪಿ ಶರಣ್ ತಲೆಮರೆಸಿಕೊಂಡಿದ್ದು ಲಕ್ಕವಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

When he came to the fair he was hacked to death with a machete